ತಮಿಳುನಾಡಿನಲ್ಲಿ ಬಿಜೆಪಿಗೆ ಆನೆಬಲ ತರಲು ಮುಂದಾದ ದಕ್ಷಿಣ ಭಾರತದ ಖ್ಯಾತ ನಟ. ಯಾರು ಗೊತ್ತೇ???

ನಮಸ್ಕಾರ ಸ್ನೇಹಿತರೇ ಇದೀಗ ಬಿಜೆಪಿ ಪಕ್ಷವು ಇದೇ ಮೊಟ್ಟ ಮೊದಲ ಬಾರಿಗೆ ತಮಿಳುನಾಡಿನಲ್ಲಿ ಕೇಸರಿ ಕಲರವನ್ನು ಆರಂಭಿಸಲು ಭರ್ಜರಿ ಸಿದ್ದತೆ ನಡೆಸಿದೆ. ಈಗಾಗಲೇ ಬಿಜೆಪಿ ಪಕ್ಷ ತನ್ನ ಎಲ್ಲಾ ಪ್ರಮುಖ ಅಸ್ತ್ರಗಳನ್ನು ಬಿಡುಗಡೆ ಮಾಡುತ್ತಿದ್ದು ಪ್ರಾದೇಶಿಕ ಪಕ್ಷಗಳ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಒಂದೆಡೆ ಪ್ರಾದೇಶಿಕ ಪಕ್ಷಗಳು ತಮ್ಮ ಅಸ್ತಿತ್ವವನ್ನು ಉಳಿಸಿ ಕೊಳ್ಳಲು ಕಷ್ಟಪಡುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಕೂಡ ತಮಿಳುನಾಡಿನಲ್ಲಿ ಗೆಲ್ಲುವ ಯಾವುದೇ ಸೂಚನೆಗಳು ಕಾಣಿಸುತ್ತಿಲ್ಲ

ಅದರಲ್ಲಿಯೂ ಬಿಜೆಪಿ ಪಕ್ಷಕ್ಕೆ ಖ್ಯಾತ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಸೇರಿ ಕೊಂಡಿರುವುದು ಬಿಜೆಪಿ ಪಕ್ಷಕ್ಕೆ ಸಾಕಷ್ಟು ಬಲ ತಂದಿದೆ. ಇದೀಗ ಬಿಜೆಪಿ ಪಕ್ಷಕ್ಕೆ ತಮಿಳುನಾಡಿನಲ್ಲಿ ಮತ್ತಷ್ಟು ಬಲ ತುಂಬಲು ರಾಮಬಂಟ ಹನುಮಂತನ ಭಕ್ತ ಹಾಗೂ ದಕ್ಷಿಣ ಭಾರತದ ಖ್ಯಾತ ನಟ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ.

ಹೌದು ಸ್ನೇಹಿತರೇ ಇದೇ ಮೊಟ್ಟ ಮೊದಲ ಬಾರಿಗೆ ರಾಜಕೀಯದ ತರ ಆಸಕ್ತಿ ತೋರಿಸುತ್ತಿರುವ ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟ ಅರ್ಜುನ್ ಸರ್ಜಾ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳಲು ಭರ್ಜರಿ ಸಿದ್ದತೆ ನಡೆಸಿದ್ದಾರೆ. ಈ ಮೂಲಕ ಮತ್ತಷ್ಟು ಅಭಿಮಾನಿಗಳನ್ನು ಬಿಜೆಪಿ ಪಕ್ಷದ ಪರ ಸೆಳೆಯುವ ತಂತ್ರ ಹೆಣೆಯಲಾಗುತ್ತಿದೆ. ಇವರು ಬಿಜೆಪಿ ಪಕ್ಷ ಸೇರಿಕೊಳ್ಳುವುದು ನಿಜಕ್ಕೂ ಬಿಜೆಪಿ ಪಕ್ಷಕ್ಕೆ ಮತ್ತಷ್ಟು ಬಲವನ್ನು ತಂದು ಕೊಡಲಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ.

Comments are closed.