Kannada News: ತಗೋಳಪ್ಪಾ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಒಂದು ಹೆಜ್ಜೆ ಮುಂದೆ ಹೋದ ಚೇತನ್- ಇಷ್ಟು ದಿನ ಸೈಲೆಂಟ್ ಆಗಿ ಇದ್ದು ಈಗ ಬೇಡಿಕೆ ಇಟ್ಟದ್ದು ಏನು ಗೊತ್ತೇ??

Kannada News: ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದು, ಕಾಂಗ್ರೆಸ್ ಪಕ್ಷವು ಜಯಭೇರಿ ಸಾಧಿಸಿದೆ. ಸಿದ್ದರಾಮಯ್ಯ ಅವರು ಶಾಸಕಾಂಗ ಸಭೆಯ ನಂತರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ಮಾಹಿತಿ ಸಿಕ್ಕಿದೆ. ಕಾಂಗ್ರೆಸ್ ಪಕ್ಷ ಈಗ ಹೊಸ ಸರ್ಕಾರದ ರಚನೆಯಲ್ಲಿ ತೊಡಗಿರುವಾಗ, ನಟ ಚೇತನ್ ಅವರು ಸಿದ್ದರಾಮಯ್ಯ ಅವರು ಸಿಎಂ ಆದ ತಕ್ಷಣ ಮಾಡಬೇಕಾದ ಕೆಲವು ಕಾರ್ಯಗಳನ್ನು ತಿಳಿಸಿದ್ದಾರೆ.

Kannada News: ತಗೋಳಪ್ಪಾ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಒಂದು ಹೆಜ್ಜೆ ಮುಂದೆ ಹೋದ ಚೇತನ್- ಇಷ್ಟು ದಿನ ಸೈಲೆಂಟ್ ಆಗಿ ಇದ್ದು ಈಗ ಬೇಡಿಕೆ ಇಟ್ಟದ್ದು ಏನು ಗೊತ್ತೇ?? 2

ನಟ ಚೇತನ್ ಅಹಿಂಸಾ ಅವರು ಹಲವಿ ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡುವ ಮೂಲಕ ಸುದ್ದಿಯಲ್ಲಿರುತ್ತಾರೆ ಇತ್ತೀಚೆಗೆ ರಾಜ್ಯದ ಸಿಎಂ ಯಾರಾಗಬೇಕು ಎನ್ನುವ ವಿಚಾರಕ್ಕೂ ಚೇತನ್ ಅಹಿಂಸಾ ಅವರು ಪ್ರತಿಕ್ರಿಯೆ ನೀಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಮಾಡಬೇಕಾದ ಕೆಲಸಗಳು ಏನೇನು ಎಂದು ಲಿಸ್ಟ್ ಮಾಡಿದ್ದಾರೆ. ಇದನ್ನು ಓದಿ..iPhone 14: ಹೊಸ ಫೋನ್ ಆದರೂ ಭರ್ಜರಿ ಆಫರ್- ಐಫೋನ್ 14 ಎಷ್ಟು ಕಡಿಮೆಗೆ ಸಿಗುತ್ತಿದೆ ಗೊತ್ತೆ?? ಆಫರ್ ತಿಳಿದರೆ ಇಂದೇ ಖರೀದಿ ಮಾಡುತ್ತೀರಿ

ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ನಟ ಚೇತನ್ ಅವರು, “ಸಿದ್ದರಾಮಯ್ಯ ಅವರು ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ.. ಅವರು ತಕ್ಷಣ ಮಾಡಬೇಕಾದ ಕೆಲವು ಕಾರ್ಯಗಳು ಇಲ್ಲಿವೆ: ಎಲ್ಲಾ 5 ಚುನಾವಣಾ ಯೋಜನೆಗಳನ್ನು ಜಾರಿಗೊಳಿಸಬೇಕು.. 1.ಗೋಹತ್ಯೆ ವಿರೋಧಿ ಮಸೂದೆ & ಮತಾಂತರ ವಿರೋಧಿ ಮಸೂದೆಯನ್ನು ತೆಗೆದುಹಾಕಬೇಕು; 2,4% ಮುಸ್ಲಿಂ OBC ಮೀಸಲಾತಿಯನ್ನು ಮರುಸ್ಥಾಪಿಸಬೇಕು

2.ಜಾತಿ ಗಣತಿಯನ್ನು ಬಹಿರಂಗಪಡಿಸಬೇಕು/ಹೊರಗೆ ತರಬೇಕು 3.ಎಸ್ಟಿ (ST) ಒಳ ಮೀಸಲಾತಿ ಮತ್ತು ಖಾಸಗಿ ವಲಯದ ಮೀಸಲಾತಿಯನ್ನು (ಜಾತಿ/ಪ್ರದೇಶ/ಇತ್ಯಾದಿ) ಜಾರಿಗೊಳಿಸಬೇಕು..” ಈ ನಾಲ್ಕು ಕೆಲಸಗಳನ್ನು ಸಿದ್ದರಾಮಯ್ಯ ಅವರು ಮಾಡಲೇಬೇಕು ಎಂದು ನಟ ಚೇತನ್ ಅಹಿಂಸಾ ಅವರು ತಿಳಿಸಿದ್ದು, ಸಿದ್ದರಾಮಯ್ಯನವರು ಈ ಕೆಲಸಗಳನ್ನು ಮಾಡುತ್ತಾರಾ ಎಂದು ಕಾದು ನೋಡಬೇಕಿದೆ. ಇದನ್ನು ಓದಿ..Personal Loans: ಅತಿ ಕಡಿಮೆ ಬಡ್ಡಿ ದರದಲ್ಲಿ ಅತಿ ಕಡಿಮೆ ಸಮಯದಲ್ಲಿ ವೈಯಕ್ತಿಕ ಸಾಲ ನೀಡುವ ಬ್ಯಾಂಕ್ ಗಳು ಯಾವುವು ಗೊತ್ತೇ? ಕಷ್ಟ ಎಂದರೆ ಇಲ್ಲಿ ತೆಗೆದುಕೊಳ್ಳಿ.