ಬಿಗ್ ನ್ಯೂಸ್: ಆರ್ ಆರ್ ನಗರ ಹಾಗೂ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಆಂತರಿಕ ಸಮೀಕ್ಷೆ ಬಹಿರಂಗ !

ನಮಸ್ಕಾರ ಸ್ನೇಹಿತರೇ ಇದೀಗ ನಿಮಗೆಲ್ಲರಿಗೂ ತಿಳಿದಿರುವಂತೆ ಇಡೀ ರಾಜ್ಯದ ಎಲ್ಲೆಡೆ ಉಪಚುನಾವಣೆಯ ಸದ್ದು ಜೋರಾಗಿದೆ. ನಡೆಯುತ್ತಿರುವುದು ಕೇವಲ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಯಾದರೂ ಕೂಡ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ತಮ್ಮ ಪ್ರತಿಷ್ಟೆಯನ್ನು ಪಣಕ್ಕಿಟ್ಟು ಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲಾ ರೀತಿಯ ಕಸರತ್ತುಗಳನ್ನು ನಡೆಸಿದ್ದರು. ಇದೀಗ ಚುನಾವಣೆ ಮುಗಿದಿದ್ದು ಸಾಧಾರಣ ಸಂಖ್ಯೆಗಳಲ್ಲಿ ಮತ ಚಲಾವಣೆಯಾಗಿದೆ. ಆದಕಾರಣ ಯಾವ ಪಕ್ಷ ಗೆಲುವು ಸಾಧಿಸುತ್ತದೆ ಎಂಬುದನ್ನು ಹೇಳುವುದು ಸುಲಭವಲ್ಲ ಎಂದು ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕುತ್ತಿದ್ದಾರೆ.

ಆದ ಕಾರಣದಿಂದ ಫಲಿತಾಂಶ ತೀವ್ರ ಕುತೂಹಲ ಮೂಡಿಸಲಿದೆ ಎಂದು ಅಭಿಪ್ರಾಯ ಕೇಳಿ ಬರುತ್ತಿರುವ ಸಂದರ್ಭದಲ್ಲಿ ಮೂರು ಪಕ್ಷಗಳು ತಮ್ಮದೇ ಆದ ಸೋಲು ಹಾಗೂ ಗೆಲುವಿನ ಲೆಕ್ಕಾಚಾರಗಳನ್ನು ಆರಂಭಿಸಿದೆ. ಆದರೆ ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಆಂತರಿಕ ಸಮೀಕ್ಷೆ ಬಹಿರಂಗಗೊಂಡಿದ್ದು, ಈ ಹಿಂದಿನ ಎಲ್ಲಾ ಚುನಾವಣೋತ್ತರ ಬಿಜೆಪಿ ಆಂತರಿಕ ಸಮೀಕ್ಷೆಗಳು ನಿಜವಾಗಿದ್ದು ಆಂತರಿಕ ಸಮೀಕ್ಷೆ ಕೂಡ ಭಾರೀ ಕುತೂಹಲ ಮೂಡಿಸಿತ್ತು.

ಇದೀಗ ಬಿಜೆಪಿ ಪಕ್ಷದ ಆಂತರಿಕ ಸಮೀಕ್ಷೆಯ ವರದಿಯನ್ನು ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ರವರು ಬಹಿರಂಗಪಡಿಸಿದ್ದಾರೆ. ಹೌದು ಸ್ನೇಹಿತರೇ ಕರ್ನಾಟಕ ಎಂಬುದು ಬಿಜೆಪಿ ಪಕ್ಷದ ಭದ್ರಕೋಟೆಯಾಗಿದ್ದು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಪಕ್ಷದ ಆಂತರಿಕ ಸಮೀಕ್ಷೆಯ ಪ್ರಕಾರ ಶಿರಾ ಹಾಗೂ ರಾಜರಾಜೇಶ್ವರಿನಗರದ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಭಾರಿ ಅಂತರದಿಂದ ಗೆಲುವು ಕಾಣಲಿದ್ದಾರೆ ಎಂಬುದು ಬಿಜೆಪಿ ಪಕ್ಷದ ಆಂತರಿಕ ಸಮೀಕ್ಷೆಯಿಂದ ಬಹಿರಂಗಗೊಂಡಿದೆ. ಆದಕಾರಣ ನಾವೆಲ್ಲರೂ ಬಹಳ ಆತ್ಮವಿಶ್ವಾಸದಿಂದ ಚುನಾವಣಾ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ಇನ್ನು ಈಗಾಗಲೇ ಕಾಂಗ್ರೆಸ್ ಪಕ್ಷ ಇವಿಎಂ ಮೇಲೆ ಆ’ರೋಪ ಆರಂಭಿಸಿರುವ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದು ಈಗಾಗಲೇ ತಿಳಿದಿದೆ. ಕಾಂಗ್ರೆಸ್ ಪಕ್ಷ ಗೆದ್ದರೆ ಮಾತ್ರ ಜನರ ಆದೇಶ ಎನ್ನುತ್ತಾರೆ, ಸೋತರೇ ಇವಿಎಂ ದೋ’ಷ ಎಂದು ಸುಖಾಸುಮ್ಮನೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

Comments are closed.