ಮಿಷನರಿಗಳಿಗೆ ಬಿಗ್ ಶಾಕ್ ನೀಡಿ ಮತ್ತೊಂದು ಸ್ಪಷ್ಟ ಸಂದೇಶ ರವಾನೆ ಮಾಡಿದ ರಾಜಾಹುಲಿ !

ಇದೀಗ ದೇಶದ ಎಲ್ಲೆಡೆ ಮಿಷನರಿಗಳು ದಿನೇ ದಿನೇ ಬಡವರನ್ನು ಕನ್ವರ್ಟ್ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ. ವಿದೇಶಗಳಿಂದ ಲಕ್ಷಾಂತರ ಕೋಟಿಗಳಷ್ಟು ಹಣ ಹರಿದು ಬರುತ್ತಿದ್ದು ಕಳೆದ ಕೆಲವು ದಿನಗಳ ಹಿಂದಷ್ಟೇ ಮೋದಿ ಸರ್ಕಾರವು ಇವುಗಳ ಮೇಲೆ ಕಠಿಣ ಕ್ರಮ ಕೈಗೊಂಡು ಹಲವಾರು ಎನ್ಜಿಒ ಗಳನ್ನು ಭಾರತ ದೇಶದಿಂದ ಹೊರದಬ್ಬಿತ್ತು. ಒಂದೆಡೆ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರವು ಮಿಷನರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿರುವ ಸಂದರ್ಭದಲ್ಲಿ ಮತ್ತೊಂದೆಡೆ ಕರ್ನಾಟಕದ ರಾಜಹುಲಿ ಮತ್ತೊಂದು ಕಠಿಣ ಕ್ರಮ ಕೈಗೊಳ್ಳುವ ಮೂಲಕ ಮಿಷನರಿಗಳಿಗೆ ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ.

ಈ ಮೊದಲು ಕನಕಪುರದಲ್ಲಿ ಯಾವುದೇ ಕಾರಣಕ್ಕೂ ಶಿಲುಬೆ ನಿರ್ಮಾಣವಾಗಲು ಬಿಡುವುದಿಲ್ಲ ಎಂದು ಹೇಳಿ ಡಿಕೆ ಶಿವಕುಮಾರ್ ಅವರ ವಿರುದ್ಧ ರಾಜಕೀಯವಾಗಿ ತೊಡೆತಟ್ಟಿ ಶಿಲುಬೆ ನಿರ್ಮಾಣ ಮಾಡಲು ಮುಂದಾಗಿದ್ದ ತಂಡವನ್ನು ತಡೆಹಿಡಿದು, ಮಿಷನರಿಗಳಿಗೆ ರಾಜ್ಯದಲ್ಲಿ ಅವಕಾಶವಿಲ್ಲ ಎಂಬುದನ್ನು ತೋರಿಸಿದ್ದ ಬಿಎಸ್ ಯಡಿಯೂರಪ್ಪನವರು ಇದೀಗ ಈಗಾಗಲೇ ತಮ್ಮ ರೆಕ್ಕೆಯನ್ನು ಬಹಳ ವಿಶಾಲವಾಗಿ ಚಿಕ್ಕಬಳ್ಳಾಪುರದಲ್ಲಿ ವಿಸ್ತರಿಸಿದ್ದ ಮಿಷನರಿಗಳ ಮೇಲೆ ಕಠಿಣ ಕ್ರಮ ಕೈಗೊಂಡಿದ್ದಾರೆ.

ಹೌದು ಇದೀಗ ಬಂದಿರುವ ಲೇಟೆಸ್ಟ್ ಮಾಹಿತಿಯ ಪ್ರಕಾರ ಚಿಕ್ಕಬಳ್ಳಾಪುರದಲ್ಲಿ ವಿವಿಧ ಪ್ರದೇಶಗಳಲ್ಲಿ 18 ಶಿಲುಬೆಗಳನ್ನು ರಾಜ್ಯ ಸರ್ಕಾರ ತೆರವುಗೊಳಿಸಿದೆ, ಈ ಶಿಲುಬೆಗಳನ್ನು ನಿರ್ಮಾಣ ಮಾಡಲು ಬಳಸಿದ್ದ ಬರೋಬ್ಬರಿ 173 ಎಕರೆ ಜಾಗವನ್ನು ರಾಜ್ಯ ಸರ್ಕಾರ ವ’ಶಪಡಿಸಿಕೊಂಡಿದ್ದು, ಈ ರೀತಿಯ ರಾಜ್ಯದ ಭೂಮಿಯನ್ನು ದುರುಪಯೋಗಪಡಿಸಿಕೊಳ್ಳಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಮತ್ತೊಮ್ಮೆ ರವಾನೆ ಮಾಡಿದೆ. ಅಲ್ಲಲ್ಲಿ ಪ್ರತಿಭಟನೆಯ ಮಾತುಗಳು ಕೇಳಿ ಬಂದರೂ ಬಿಎಸ್ ಯಡಿಯೂರಪ್ಪನವರ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಇರುವವರೆಗೂ ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ರಾಜ್ಯದಲ್ಲಿ ನಡೆಯಲು ಬಿಡುವುದಿಲ್ಲ ಎಂದು ಸ್ಥಳೀಯ ರಾಜಕೀಯ ಮುಖಂಡರು ಸ್ಪಷ್ಟಪಡಿಸಿದ್ದು ಬಿಎಸ್ ಯಡಿಯೂರಪ್ಪನವರ ಆದೇಶ ಇದಾಗಿದೆ ಎಂದು ತಿಳಿಸಿದ್ದಾರೆ.

Comments are closed.